
ಕರಿಮಣಿ ಸರವನ್ನು ಧರಿಸುವುದರಿಂದ ಆಗುವ ಪ್ರಯೋಜನವೇನು. ಮಾಂಗಲ್ಯ ಧರಿಸುವುದು ಕೇವಲ ಪ್ರದರ್ಶನಕ್ಕಲ್ಲ, ಅದಕ್ಕೆ ವಿಶೇಷ ಹಿನ್ನೆಲೆ ಇದೆ. ಹಿಂದೂ ಧರ್ಮದಲ್ಲಿ ಮದುವೆ, ಮುಂಜಿ ಹೀಗೆ ಹಲವು ಸಂಪ್ರದಾಯಕ್ಕೆ ಎಷ್ಟು ಮಹತ್ವ ಇದೆಯೇ ಅದೇ ರೀತಿ, ವರ, ವಧುವಿಗೆ ಕಟ್ಟುವ ಕರಿಮಣಿ ಸರಕ್ಕೂ ಅಷ್ಟೇ ಪಾಮುಖ್ಯತೆ ಇದೆ. ಮದುವೆಯ ಸಾಂಕೇತವಾಗಿ ಸ್ತ್ರಿಯರಿಗೆ ಕರಿಮಣಿ ತಾಳಿ, ಕುಂಕುಮ, ಗಾ’ಜಿನ ಬಳೆ, ಕಾಲುಂಗರ, ಹೂವು ನೀಡಲಾಗುವುದು ಅದು ಗೃಹಿಣಿಗೆ ಸೌಭಾಗ್ಯಕರವಾದವು.
ಮಂಗಳ ಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣವಿದೆಯಲ್ಲ ಅದರಲ್ಲಿ ಮಾಂಗಲ್ಯ ಯಾವುದು. ಮಾಂಗಲ್ಯಧಾರಣದ ಸಂ’ಪ್ರದಾಯ ಹೇಗೆ ಬಂತು. ಬಂಗಾರದ ಒಡವೆಯಲ್ಲಿ ಕರಿಮಣಿಗಳೇಕೆ. ಕರಿಮಣಿ ಸರದಲ್ಲಿ ಹವಳವೇಕೆ ಎಂಬುದನ್ನು ನೋಡೋಣ. ಆದಿಶಂಕರರು ರಚಿಸಿದ ಸೌಂದರ್ಯ ಲಹರಿಯಲ್ಲಿ, ಶಿವನು ಪಾರ್ವತಿಗೆ ಮಂಗಲ ಸೂತ್ರವನ್ನು ಕಟ್ಟಿದನೆಂದಿದೆ. ಲಲಿತಾ ಸಹಸ್ರನಾಮ, ಸೌಂದರ್ಯ ಲಹರಿಗಳು ಚಾಲ್ತಿಯಿರುವ ಸ್ತೋತ್ರಗಳಾಗಿದ್ದು ಮಾಂಗಲ್ಯ ಧಾರಣವನ್ನು ಪ್ರಸ್ತಾಪಿಸಿವೆ.
ವಿವಾಹಿತ ಹೆಂಗಸಿನ ಮೇಲೆ ಕೆಟ್ಟ ದೃಷ್ಟಿ ಬೀಳದಿರಲೆಂದೇ ಮಂಗಲ ಸೂತ್ರದಲ್ಲಿ ಕಪ್ಪು ಬಣ್ಣದ ಮಣಿಗಳಿರುವುದು ಎಂಬ ನಂಬಿಕೆಯಿದೆ.
ಕಪ್ಪು ಮಣಿಗಳಿಗೆ ಋಣಾತ್ಮಕ ಶಕ್ತಿಕ್ಷೇತ್ರವನ್ನೆಲ್ಲ ಹೀರಿ ಕೊಂಡು ಅದು ವಧುವನ್ನು ಮತ್ತು ಅವಳ ಕುಟುಂಬವನ್ನು ತಗಲದಂತೆ ಮಾಡುವ ಗುಣವಿರುತ್ತದೆ. ಕರಿಮಣಿಗಳನ್ನು ಒಂದೊಂದಾಗಿ ಪೋಣಿಸಿದಾಗ ಅದೊಂದು ಸುಂದರ ಸರಮಾಲೆ ಆಗುವುದನ್ನು, ಗಂಡಿನ ಕುಟುಂಬವೆಂಬ ಸೂತ್ರದೊಂದಿಗೆ ನವವಿವಾಹಿತ ಹೆಣ್ಣು ಅಷ್ಟೇ ಸುಲಲಿತವಾಗಿ ಹೊಂದಿ ಕೊಳ್ಳ ಬೇಕು/ ಹೊಂದಿ ಕೊಳ್ಳುತ್ತಾಳೆ ಎಂಬ ಆಶಯಕ್ಕೆ ಹೋಲಿಸುತ್ತಾರೆ.
ಕರಿಮಣಿ ಸರದ ಮತ್ತೊಂದು ವೈಶಿಷ್ಟ್ಯ ಏನೆಂದರೆ ಎದೆಯ ಭಾಗದಲ್ಲಿ ಉಂಟಾಗುವ ಉಷ್ಣತೆಯನ್ನು ಹೀರಿ ಕೊಳ್ಳುತ್ತದೆ. ಇದರ ಅತಿ ಮುಖ್ಯವಾದ ಉಪಯುಕ್ತತೆ ಹಾಲುಣಿಸುವ ತಾಯಿಯಲ್ಲಿ ಎದೆ ಹಾಲಿನ ಉಷ್ಣತೆಯನ್ನು ಹೀರಿಕೊಂಡು ಎದೆ ಹಾಲು ಕೆಡದಂತೆ ಶಿಶುವಿಗೆ ಉಣ್ಣಲೂ ಅನುಕೂಲವಾದ ಸಮ ಉಷ್ಣತೆಯಲ್ಲಿರಿಸಲು ಸಹಾಯ ಮಾಡುತ್ತದೆ. ಮಂಗಲ ಸೂತ್ರ ಅಥವಾ ತಾಳಿಯಲ್ಲಿ ಪ್ರಾದೇಶಿಕವಾಗಿ, ಮ’ತ – ಪಂಥಗಳಿಗೆ ಅನುಸಾರವಾಗಿ ಅಲ್ಪಸ್ವಲ್ಪ ವ್ಯತ್ಯಾಸಗಳೂ ಕಂಡುಬರುತ್ತವೆ.
ಬ್ರಾಹ್ಮಣ ವರ್ಗದಲ್ಲಿ ಎರಡು ಪದಕಗಳ ತಾಳಿ, ಕಾಯಸ್ಥ, ಮರಾಠಾ ಸ್ತ್ರೀಯರಿಗೆ ಒಂದು ಪದಕದ ತಾಳಿ, ವೈಶ್ಯ ಮತ್ತು ಚಿನಿವಾರ ಪಂಗಡಗಳಲ್ಲಿ ಚಿನ್ನ ವಜ್ರ, ವೈಢೂರ್ಯಗಳಿರುವ ತಾಳಿ – ಹೀಗೆ ವೈವಿಧ್ಯಗಳು. ವೀರಶೈವ ಸ್ತ್ರೀಯರು ತಾಳಿಯೊಂದಿಗೇ ಲಿಂಗದ ಕರಂಡಕವನ್ನು ಕಟ್ಟಿ ಕೊಳ್ಳುವುದೂ ಇದೆ. ದಕ್ಷಿಣ ಭಾರತದಲ್ಲಿ ಹಿಂದುಗಳಷ್ಟೇ ಅಲ್ಲದೆ ಕ್ರಿಶ್ಚಿಯನ್ ಮತ್ತು ಮು’ಸ್ಲಿಂ ಮತಸ್ಥ ಸ್ತ್ರೀಯರೂ ವಿವಾಹದ ನಂತರ ತಾಳಿ ಕರಿಮಣಿ ಸರ ಧರಿಸುತ್ತಾರೆ.
ಗೃಹಿಣಿಯರು ಇಂದು ಸೌಭಾಗ್ಯಕರವಾದ ಇವುಗಳನ್ನು ಧರಿಸುವುದರಲ್ಲಿ ಆಸಕ್ತಿ ವಹಿಸುತ್ತಿಲ್ಲ. ಕೆಲವರು ಕರಿಮಣಿಯನ್ನು ಆಗಾಗ ಬಿಚ್ಚಿಟ್ಟು ಹೊರಗೆ ಹೋಗುವಾಗ ಧರಿಸುತ್ತಿದ್ದಾರೆ. ಆದರೆ ಅವುಗಳಿಗಿರುವ ಮಹತ್ವವನ್ನು, ಸಂಪ್ರದಾಯವನ್ನು ಎತ್ತಿ ಹಿಡಿಯುವ ಗೌರವಾರ್ಹ ಆಗುವಂತಹ ಮಂಗಳಕರ ಆಭರಣಗಳನ್ನು ಧರಿಸುವುದರಿಂದ ನಾರಿಯು ಪೂಜನೀಯಳು ಆಗುತ್ತಾಳೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
